ಪ್ರಕೃತಿ ಬೆಳಗಾವಿ

*ಹುದಲಿ ಸಮೀಪ ರೈಲ್ವೆ ಬ್ರಿಜ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದ ಸಮೀಪ ನಿರ್ಮಾಣ ಹಂತದಲ್ಲಿರುವ ರೈಲ್ವೆ ಬ್ರಿಜ್ ಕಾಮಗಾರಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಸಚಿವರು ಕಾಮಗಾರಿಯ ಪ್ರಗತಿ, ತಾಂತ್ರಿಕ ಗುಣಮಟ್ಟ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಬ್ರಿಜ್ ಕಾಮಗಾರಿಯಿಂದ ಈ ಭಾಗದ ಜನರ ಸಂಚಾರಕ್ಕೆ ಆಗುತ್ತಿರುವ ತಾತ್ಕಾಲಿಕ ತೊಂದರೆಗಳನ್ನು ಆದಷ್ಟು ಬೇಗ ನಿವಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾಮಗಾರಿಯನ್ನು ಯಾವುದೇ ರೀತಿಯ ವಿಳಂಬವಿಲ್ಲದೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ರೈಲ್ವೆ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಕಾಮಗಾರಿಯ ವಿವಿಧ ಹಂತಗಳ ಬಗ್ಗೆ ಸಚಿವರು ಚರ್ಚಿಸಿ, ಅಗತ್ಯವಿರುವ ಸಮನ್ವಯದೊಂದಿಗೆ ಕೆಲಸವನ್ನು ವೇಗಗೊಳಿಸುವಂತೆ ಸೂಚಿಸಿದರು.

ಈ ರೈಲ್ವೆ ಬ್ರಿಜ್ ಪೂರ್ಣಗೊಂಡ ಬಳಿಕ ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸುಗಮ ಸಂಚಾರ ವ್ಯವಸ್ಥೆ ದೊರೆಯಲಿದ್ದು, ವಾಹನ ದಟ್ಟಣೆ ಕಡಿಮೆಯಾಗುವ ಜೊತೆಗೆ ರಸ್ತೆ ಸುರಕ್ಷತೆಯೂ ಹೆಚ್ಚಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪರಿಶೀಲನೆ ವೇಳೆ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು, ರೈಲ್ವೆ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.********************************

Leave a Reply

Your email address will not be published. Required fields are marked *

Back to top button