ಪ್ರಕೃತಿ ಬೆಳಗಾವಿ
*ದೆಹಲಿಯಲ್ಲಿ ಕಾರುಗಳ ಡಿಕ್ಕಿ: ಶಾಸಕರಾದ ಅಭಯ ಪಾಟೀಲ, ಅನಿಲ್ ಝಾಗೆ ಸಣ್ಣಪುಟ್ಟ ಗಾಯ*

ಪ್ರಕೃತಿ ಬೆಳಗಾವಿ ಸುದ್ದಿ : ನವದೆಹಲಿ : ದೆಹಲಿಯ ಐಟಿಒ ಪ್ರದೇಶದ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಹಾಗೂ ಕಿರಾರಿ ಶಾಸಕ ಅನಿಲ್ ಝಾ ಸೇರಿದಂತೆ ಹಲವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಶಾಸಕರು ಪ್ರಯಾಣಿಸುತ್ತಿದ್ದ ವಾಹನ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಆ ಕಾರಿನಲ್ಲಿ ವ್ಯಕ್ತಿಯೊಬ್ಬರು ತಮ್ಮ ಪತ್ನಿ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದರು.
ಅಪಘಾತದ ಬಳಿಕ ಎರಡೂ ವಾಹನಗಳಲ್ಲಿದ್ದವರನ್ನು ಚಿಕಿತ್ಸೆಗಾಗಿ ಎಲ್ಎನ್ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದ ವಾಹನಗಳನ್ನು ತೆರವುಗೊಳಿಸಿದರು.*****************************






