*ಬೆಳಗಾವಿ ಕಂಗ್ರಾಳಿ ಬುದ್ರುಕ್ನಲ್ಲಿ ನಿಗೂಢ ಸಾವು; ಲಾರಿಯಲ್ಲೇ ಶವವಾಗಿ ಪತ್ತೆಯಾದ ಚಾಲಕ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ ತಾಲೂಕಿನ ಕಂಗ್ರಾಳಿ ಬುದ್ರುಕ್ನಲ್ಲಿ ದುರಂತ ಲಾರಿ ಕ್ಯಾಬಿನ್ನಲ್ಲೇ ಚಾಲಕನ ನಿಗೂಢ ಸಾವು.
ಸ್ಥಳಕ್ಕೆ ಭೇಟಿ ನೀಡಿದ ಕಾಕತಿ ಪೊಲೀಸರು
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಬೆಳಗಾವಿ ತಾಲೂಕಿನ ಕಂಗ್ರಾಳಿ ಬುದ್ರುಕ್ನಲ್ಲಿ ಸೋಮವಾರ ಮುಂಜಾನೆ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಮುಖ್ಯ ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಯೊಳಗೆ ಚಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಸದ್ಯ ಆತಂಕ ಹಾಗೂ ತೀವ್ರ ರಂಗಿನ ಕುತೂಹಲ ಮೂಡಿಸಿದೆ.
ಮೃತರನ್ನು ಕಲಮೇಶ್ವರ ಗಲ್ಲಿಯ ನಿವಾಸಿ ಗಜಾನನ ವಾಮನ ಹುರುಡೆ (45 ವರ್ಷ) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗಜಾನನ ಅವರು ಭಾನುವಾರ ರಾತ್ರಿ ತಮ್ಮ ಲಾರಿಯನ್ನು ಕಲಮೇಶ್ವರ ಸಹಕಾರಿ ಸಂಘದ ಮುಂಭಾಗದ ಮುಖ್ಯ ರಸ್ತೆಯಲ್ಲಿ ನಿಲ್ಲಿಸಿ, ಅದರೊಳಗೇ ಮಲಗಿದ್ದರು. ಆದರೆ, ಸೋಮವಾರ ಮುಂಜಾನೆ ದಾರಿಹೋಕರು ಗಮನಿಸಿದಾಗ ಅವರು ಯಾವುದೇ ಚಲನೆ ಇಲ್ಲದೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಇದರಿಂದ ಗಾಬರಿಗೊಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಕಾಕತಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮಹಜರು ಪ್ರಕ್ರಿಯೆ ಮುಗಿಸಿ, ಚಾಲಕನ ಮೃತದೇಹವನ್ನು ಲಾರಿಯಿಂದ ಹೊರತೆಗೆದು ಮುಂದಿನ ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಿದ್ದಾರೆ. ಗಜಾನನ ಅವರ ಸಾವಿಗೆ ನಿಖರವಾದ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲವಾಗಿದ್ದು, ಪೋಸ್ಟ್ಮಾರ್ಟಮ್ ವರದಿ ಬಂದ ನಂತರವಷ್ಟೇ ಸತ್ಯಾಂಶ ಹೊರಬರಬೇಕಿದೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.******************************






