ಪ್ರಕೃತಿ ಬೆಳಗಾವಿಬೆಳಗಾವಿರಾಜಕೀಯರಾಜ್ಯ

ದಸರಾ ನೋಡುತ್ತಿರುವುದೇ ಖುಷಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!

ಶಾರದಾ ದೇವಿನಗರದ ಸಿಎಂ ನಿವಾಸಕ್ಕೆ ಭೇಟಿಕೊಟ್ಟ ಸಚಿವರು…

ಪ್ರಕೃತಿ ಬೆಳಗಾವಿ ಸುದ್ದಿ : ಮೈಸೂರು : ವಿಶ್ವ ಪ್ರಸಿದ್ಧ ಮೈಸೂರು ದಸರಾ ನೋಡಲು ಖುಷಿಯಾಗುತ್ತಿದೆ. ಜೀವನದಲ್ಲಿ ಮೊದಲ ಬಾರಿಗೆ ದಸರಾ ನೋಡುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮೈಸೂರಿನ ಶಾರದಾ ದೇವಿನಗರದ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಸಚಿವರು ಭೇಟಿಯಾದರು. ಈ ವೇಳೆ ಮಾತನಾಡಿದ ಸಚಿವರು ಜೀವನದಲ್ಲಿ ಒಮ್ಮೆಯಾದರೂ ದಸರಾ ನೋಡಬೇಕು. ಇಂದು ದಸರಾ ನೋಡುವ ಕನಸು ಈಡೇರುತ್ತಿದೆ ಎಂದರು.

ದಸರಾ ನೋಡಲು ಖುಷಿಯಾಗುತ್ತಿದೆ‌. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಜೊತೆಯಲ್ಲಿ ದಸರಾ ನೋಡುತ್ತಿರುವೆ. ದಸರಾ ವೈಭವವನ್ನು ನೋಡುವುದೇ ಚಂದ ಎಂದು ಸಚಿವರು ತಿಳಿಸಿದರು.

* *ಸಿಎಂ ಭೇಟಿಯಾದ ಸಚಿವರು*

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವರು ಕೆಲಕಾಲ ಚರ್ಚೆ ನಡೆಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಸಚಿವ ಕೆ.ವೆಂಕಟೇಶ್, ಶಾಸಕರಾದ ಕೃಷ್ಣಮೂರ್ತಿ, ಡಿ.ರವಿ ಶಂಕರ್, ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು ಸೇರಿದಂತೆ ಹಲವರು ಉಪಸ್ಥಿತರಿದ್ದರು.

* *ರೈಲು ದುರಂತಕ್ಕೆ ಸಂತಾಪ*

ತಮಿಳುನಾಡಿನ ಪೆರಂಬೂರು ಸಮೀಪ ಮೈಸೂರು ದರ್ಬಾಂಗ್‌ ಎಕ್ಸ್‌ಪ್ರೆಸ್‌ ಹಾಗೂ ಗೂಡ್ಸ್‌ ರೈಲು ನಡುವೆ ಅಪಘಾತಕ್ಕೆ ಸಚಿವರು ಸಂತಾಪ ವ್ಯಕ್ತಪಡಿಸಿದರು. ಅಪಘಾತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬದೊಂದಿಗೆ ಸರ್ಕಾರ ಇರಲಿದೆ ಎಂದರು.*********************

Back to top button