ಪ್ರಕೃತಿ ಬೆಳಗಾವಿ

*ಸೇವಾಲಾಲ ಜಯಂತಿ ಮೆರವಣಿಗೆಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆ ಳಗಾವಿ ಅಶೋಕ ವೃತ್ತದಲ್ಲಿ ಸಂತ ಶ್ರೀ ಸೇವಾಲಾಲ ಮಹಾರಾಜರ ಮೆರವಣಿಗೆಗೆ ಚಾಲನೆ ನೀಡಿದರು.

ಸೇವಾಲಾಲ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದ ಸಚಿವರು ಮೆರವಣಿಗೆಯಲ್ಲಿ ಪಾಲ್ಗೊಂಡರು.

ಈ ವೇಳೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಲಕ್ಷ್ಮೀ ಮಹಾದೇವ ರಾಥೋಡ್, ಸುರೇಶ ರಾಥೋಡ್, ದೇವೇಂದ್ರ ನಾಯ್ಕ, ಸೋಮಪ್ಪ ಕಾರಬಾರಿ, ಕಾಂತೇಶ್ ರಾಥೋಡ್, ಅಶೋಕ ಪೂಜಾರಿ, ವಿಷ್ಣು ಲಮಾಣಿ, ಪಾಂಡುರಂಗ ನಾಯ್ಕ ಸೇರಿದಂತೆ ಬಂಜಾರಾ ಸಮುದಾಯದ ಇತರರು ಉಪಸ್ಥಿತರಿದ್ದರು.*****************************

Leave a Reply

Your email address will not be published. Required fields are marked *

Back to top button