ಪ್ರಕೃತಿ ಬೆಳಗಾವಿ
*3.23 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಪೂಜೆ ನೆರವೇರಿಸಿ ಚಾಲನೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುವೆಂಪು ನಗರದ ಕೆ.ಎಲ್.ಇ ಇಂಟರ್ನ್ಯಾಷನಲ್ ಸ್ಕೂಲ್ ನ ಮುಖ್ಯ ರಸ್ತೆ ಹಾಗೂ ಜಯನಗರದ ಪ್ರಮುಖ ರಸ್ತೆಗಳ ನಿರ್ಮಾಣಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಸುಮಾರು 3.23 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳು ನಿರ್ಮಾಣಗೊಳ್ಳಲಿವೆ. ನಿಗದಿತ ಸಮಯದಲ್ಲಿ, ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ವೇಳೆ ಸ್ಥಳೀಯ ನಿವಾಸಿಗಳು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.******************************





