ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್ನಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: 14 ಮಂದಿ ವಿರುದ್ಧ ಪ್ರಕರಣ ದಾಖಲು…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಗೋಕಾಕ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನಲ್ಲಿ 74.86 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಬ್ಯಾಂಕಿನ 14 ಸಿಬ್ಬಂದಿ ವಿರುದ್ಧ ಅಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಶಹರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆರು ಕೋಟಿ ಎಪ್ಡಿ ಇಟ್ಟು ಬ್ಯಾಂಕ್ ನಲ್ಲಿ 74ಕೋಟಿ ಸಾಲ ಪಡೆದಿದ್ದ ಗೋಕಾಕ್ ಮಹಾಲಕ್ಷ್ಮೀ ಕೋ ಆಪರೇಟಿವ್ ಸೊಸೈಟಿಯ ಬ್ಯಾಂಕ್ ಸಿಬ್ಬಂದಿ ಸಾಗರ್ ಮತ್ತು 14 ಜನ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.2021ರಿಂದ 2024ರ ಅವಧಿಯಲ್ಲಿ ಸಾಲ ಪಡೆದಿದ್ದಾರೆ. ಸಾಲ ತಿರುಗಿಸಲಾಗದೇ ಒಬ್ಬರ ಜೊತೆಗೆ ಒಬ್ಬರು ಶಾಮೀಲಾಗಿ ವಂಚನೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ ಎಂದರು.
ಸಾಗರ ಹನಮಂತ ಸಬಕಾಳೆ, ವಿಶ್ವನಾಥ ಅಶೋಕ ಬಾಗಡೆ, ಸಂಭಾಜಿ ಮಲ್ಲಪ್ಪ ಘೋರ್ಪಡೆ, ಸಿದ್ದಪ್ಪ ಸದಾಶಿವ ಪವಾರ (ವ್ಯವಸ್ಥಾಪಕ), ದಯಾನಂದ ಶಿವಾಜಿ ಉಪ್ಪಿನ, ಸಂಜನಾ ಸಾಗರ ಸಬಕಾಳೆ, ಮಾಲವ್ವ ಹಣಮಂತ ಸಬಕಾಲೆ, ಗೌರವ್ವ ಬಾಳಪ್ಪ ಹವಾಲ್ದಾರ, ಚಂದ್ರವ್ವ ಹವಾಲ್ದಾರ, ಮಾಯವ್ವ ಮಾಯಪ್ಪ ಜಾಧವ, ಪರಸಪ್ಪ ಯಲ್ಲಪ್ಪ ಮಾಲೋಜಿ, ರಾಧಾ ಪರಸಪ್ಪ ಮಾಲೋಜಿ, ಸಂದೀಪ ಬಸವರಾಜ ಮರಾಠ ಮತ್ತು ಕಿರಣ ಸಕಾರಾಮ ಸುಪಲಿ ಮತ್ತಿತರರ ವಿರುದ್ಧ ದೂರು ದಾಖಲಾಗಿದೆ ಎಂದು ಎಸ್ಪಿ ಡಾ. ಭೀಮಾಶಂಕರ ಗುಳೇದ್ ಹೇಳಿದರು.***************************